ರಾಜ್ಯ ಸುದ್ದಿಅಂತಾರಾಷ್ಟ್ರೀಯಉದ್ಯೋಗ ವಾರ್ತೆಗಳುಉಪಯುಕ್ತ ಮಾಹಿತಿಗಳುಗದಗಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುಸ್ಥಳೀಯ ಸುದ್ದಿಗಳು

ಸಿಪಿಐಎಂ ಪಕ್ಷದ ಪ್ರಥಮ ಜಿಲ್ಲಾ ಸಮ್ಮೇಳನದ ಉದ್ಘಾಟನಾ ಸಮಾರಂಭ

ಸಮಾನ ಕನಿಷ್ಠವೇತನ ಜಾರಿಗೊಳಿಸಿಅಸಮಾನತೆಯನ್ನು ಹೋಗಲಾಡಿಸಿ: ಜಿ ನಾಗರಾಜ್ 

Share News

Janadhwani News Gajenndrgad : ಜೇಂದ್ರಗಡ: ಡಿ 08: ಇಡೀ ದೇಶವ್ಯಾಪಿ ಪರಿಶ್ರಮವಹಿಸಿ ದುಡಿಯುತ್ತಿರುವ ಕಾರ್ಮಿಕರಿಗೆ ವೇತನದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಿ ಘನತೆಯ ಬದುಕು ಸಾಗಿಸಲು ಕೇಂದ್ರ ಸರ್ಕಾರ ಒಂದೇ ರೀತಿಯ ಸಮಾನ ಕನಿಷ್ಠವೇತನ ಜಾರಿಗೊಳಿಸಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ನಾಗರಾಜ್ ಆಗ್ರಹಿಸಿದರು.

ನಗರದ ಸೇವಲಾಲ ಕಲ್ಯಾಣ ಮಂಟಪದಲ್ಲಿ ರವಿವಾರ ಭಾರತ ಕಮ್ಯೂನಿಷ್ಟ್ ಪಕ್ಷ (ಮಾರ್ಕ್ಸ್ ವಾದಿ) ಸಿಪಿಐ(ಎಂ)ನ ಪ್ರಥಮ ಜಿಲ್ಲಾ ಸಮ್ಮೇಳನದ ಉದ್ಘಾಟಿಸಿ ಅವರು ಮಾತನಾಡಿದರು.

ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆಗಳು ಒಂದೇ ರೀತಿ ಏರುತ್ತಿದ್ದು, ಅದಕ್ಕನುಗುಣವಾಗಿ ದುಡಿಯುವ ಜನರಿಗೆ ಕೊಳ್ಳುವ ಶಕ್ತಿ ಹೆಚ್ಚಾಗುತ್ತಿಲ್ಲ. ದೇಶದಲ್ಲಿ ಕನಿಷ್ಠ ವೇತನ ಮೂವತ್ತು ಸಾವಿರ ಜಾರಿಮಾಡಲು ಸರಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು.

ಶಿಕ್ಷಣ, ನಿರುದ್ಯೋಗ, ಆರೋಗ್ಯ, ವಸತಿ ಹಾಗೂ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ ಬದಲಾಗಿ ಕೋಮು ಸಾಮರಸ್ಯ ಕದಡುವಂತಹ ಧಾಳಿ, ಜಗಳಗಳನ್ನು ಹಚ್ಚುವ ಮೂಲಕ ಸಮಾಜದಲ್ಲಿ ದ್ವೇಷ, ವೈಷಮ್ಯವನ್ನು ಧರ್ಮ, ಜಾತಿ ಹೆಸರಿನಲ್ಲಿ ನಡೆಸುತ್ತಿದ್ದಾರೆ.

ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬುದು ಮರೀಚಿಕೆಯಾಗಿದೆ ಎಂದರು.

ರೈತರಿಗೆ ಬೆಂಬಲ ಬೆಲೆ ನೀಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಲಕ್ಷ ಮಾಡುತ್ತಿದ್ದು ಸಾಗುವಳಿ ರೈತರಿಗೆ ಹಕ್ಕು ಪತ್ರ ನೀಡಿ ಅಂತ ಹೇಳಿದ್ರೆ ಸರಕಾರ ಬಂಡವಾಳ ಶಾಹಿಗಳ ಕಂಪನಿ ಗಳಿಗೆ ಭೂಮಿಯನ್ನ ಬರೆದು ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ ಪಕ್ಷದ ಧಾರವಾಡದ ಜಿಲ್ಲಾ ಕಾರ್ಯದರ್ಶಿ ಮಹೇಶ ಪತ್ತಾರ ಮಾತನಾಡಿ; ಕಾರ್ಪೊರೇಟ್ ಬಂಡವಾಳಶಾಹಿ ಹಾಗೂ ಕೋಮುವಾದದ ಅನೈತಿಕ ಸ್ವರೂಪ ವಾಗಿರುವ ಮೋದಿ ಸರಕಾರ ಕಳೆದ ಹತ್ತು ವರ್ಷದಿಂದ ಜನವಿರೋಧಿಯಾಗಿ ಅಧಿಕಾರ ನಡೆಸುತ್ತಿದೆ. ನಮ್ಮ ಪಕ್ಷ ಈ ಭಾಗದಲ್ಲಿ ಸಣ್ಣದೇ ಆದರೂ, ಈ ಪ್ರದೇಶದ ಜನರ ಸಂಕಷ್ಠಗಳನ್ನು ಪರಿಹರಿಸಲು ಇಲ್ಲಿರುವ ಎಲ್ಲ ಅವಕಾಶವನ್ನು ಬಳಸಿಕೊಂಡು ಜನಚಳುವಳಿಯನ್ನು ಬಲಿಷ್ಠವಾಗಿ ಕಟ್ಟಬೇಕಿದೆ.

ಈ ನಿಟ್ಟಿನಲ್ಲಿ ಈ ಸಮ್ಮೇಳನ ಚರ್ಚೆ ನಡೆಸಿ ತೀರ್ಮಾನಗಳನ್ನು ಕೈಗೊಳ್ಳಲಿದೆ. ಸರಕಾರಗಳ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಶೋಷಿತ ಜನವಿಭಾಗವನ್ನು ಸಂಘಟಿಸಿ ಹೋರಾಟ ಕಟ್ಟಲು ನಾವೆಲ್ಲರೂ ಪಣತೊಡಬೇಕಿದೆ ಎಂದರು.

ಕಾರ್ಯಕ್ರಮದ ಮೊದಲು ಪಕ್ಷದ ಹಿರಿಯ ನಾಯಕರಾದ ಬಸವರಾಜ ಮಂತೂರು ಅವರು ಧ್ವಜಾರೋಹಣ ನೆರವೇರಿಸಿದರು.

ನಂತರ ಹುತಾತ್ಮ ಸ್ಥಂಭಕ್ಕೆ ಮುಖಂಡರು ಹಾಗೂ ಪ್ರತಿನಿಧಿ ಸಂಗಾತಿಗಳು ಪುಷ್ಪಾರ್ಪಣೆ ಮಾಡಿ ಗೌರವ ಕೆಂಪು ನಮನಗಳನ್ನು ಸಲ್ಲಿಸಿದರು.

ಜಿಲ್ಲಾ ಕಾರ್ಯದರ್ಶಿ ಎಂ ಎಸ್ ಹಡಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೂತನವಾಗಿ ಜಿಲ್ಲಾ ಸಮಿತಿ ಸದಸ್ಯರಾಗಿ ಎಂ ಎಸ್ ಹಡಪದ, ಬಾಲು ರಾಠೋಡ, ಮೆಹಬೂಬ್ ಹವಾಲ್ದಾರ್, ಪೀರು ರಾಠೋಡ, ಫಯಾಜ್ ತೋಟದ, ಮಹೇಶ ಹಿರೇಮಠ, ಜೈತನುಬಿ ಮುಲ್ಲಾ, ಸಂಕಪ್ಪ ಕುರಹಟ್ಟಿ, ದ್ರಾಕ್ಷಿಯಣಿ ಶಿರೂರು, ಹಾಗೂ ಖಾಯಂ ಆಹ್ವಾನಿತರಾಗಿ ಬಸವರಾಜ ಮಂತೂರು ಒಳಗೊಂಡಂತೆ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಬಾಲು ರಾಠೋಡ ಸರ್ವಾನುಮತದಿಂದ ಆಯ್ಕೆಯಾದರು.

ಸಮ್ಮೇಳನದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಎಫ್.ಎಫ್.ತೋಟದ, ಬಾಲು ರಾಠೋಡ, ಪೀರು ರಾಠೋಡ, ಮಹೇಶ ಹಿರೇಮಠ, ಶಾಖಾ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ, ಮೆಹಬೂಬ್ ಹವಾಲ್ದಾರ್, ಚೆನ್ನಪ್ಪ ಗುಗಲೋತ್ತರ, ಚಂದ್ರು ರಾಠೋಡ, ಶಿವಾಜಿ ಗಡ್ಡದ, ರೇಣಪ್ಪ ಕಲ್ಗುಡಿ, ಕರಿಯಮ್ಮ ಗುರಿಕಾರ, ನಜೀರ ಮಾಲ್ದಾರ ಸೇರಿದಂತೆ 80 ಕ್ಕೂ ಹೆಚ್ಚು ಪ್ರತಿ ನಿಧಿಗಳು ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.

ವರದಿ : ಕಿರಣ್ ನಿಡಗುಂದಿ 


Share News

Related Articles

Leave a Reply

Your email address will not be published. Required fields are marked *

Back to top button